'ಅಶೋಕ‌ ಜನ-ಮನ'ಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ

ಪುತ್ತೂರು

news-details

<p>ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ&zwnj; ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ&zwnj;ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಯಿತು.ಶುಕ್ರವಾರ ಬೆಂಗಳೂರಿನಲ್ಲಿ ಇಬ್ಬರನ್ನು ಭೇಟಿಯಾದ ಶಾಸಕರು ಪುತ್ತೂರಿನ ಐತಿಹಾಸಿಕ ಈ ಕಾರ್ಯಕ್ರಮಕ್ಕೆ ಬಂದು ಹಾರೈಸುವಂತೆ ಶಾಸಕರು&zwnj;ಮನವಿ ಮಾಡಿದರು. ಕಾರ್ಯಕ್ರಮಕ್ಕೆ ಬರುವುದಾಗಿ ಇಬ್ಬರೂ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.<br />
ವರ್ಷಂಪ್ರತಿ ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಈ ಬಾರಿ 75000 ಮಿಕ್ಕಿ ಮಂದಿಗೆ ವಸ್ತ್ರದಾನ ನಡೆಯಲಿದೆ. ಬಹಳ ಅದ್ದೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ನೇತಾರರು&zwnj; ಭಾಗವಹಿಸಲಿದ್ದಾರೆ.</p>

news-details