<p>ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜುಪೂಜಾರಿಯವರಿಗೆ ಅತ್ಯಧಿಕ ಮತಗಳು ದೊರೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಹೇಳಿದರು.<br />
ಅವರು ಬೆಟ್ಟಂಪಾಡಿ ಗ್ರಾ.ಪಂ. ಮತಗಟ್ಟೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ‌ ನವೀನ್ ರೈ ಅವರು ಮತದಾನ ಮಾಡಿದ ಬಳಿಕ ಮಾತನಾಡಿದರು.<br />
ರಾಜುಪೂಜಾರಿಯವರು ನಿಷ್ಟಾವಂತ ಕಾರ್ಯಕರ್ತರಾಗಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಅವರು ಅಪ್ಪಟ ಜಾತ್ಯಾತೀತ ಮನೋಭಾವ ಉಳ್ಳವರು. ಇವರಿಗೆ ಮತದಾರರು ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.</p>