ವಿಧಾನ ಪರಿಷತ್ತಿಗೆ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ

ಮಂಗಳೂರು

news-details

<p>ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1697 ಮತಗಳ ಅಂತರದಿಂದ ಜಯ ಸಾಧಿಸಿದರು.<br />
ಕಿಶೋರ್  ಅವರು 3,654 ಮತ ಪಡೆದಿದ್ದಾರೆ.1957 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಎಸ್ ಡಿಪಿಐನ ಅನ್ವರ್ ಸಾದತ್ 195 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿರು.ಈ ಕ್ಷೇತ್ರದಲ್ಲಿ 5906 ಮತಗಳು ಚಲಾವಣೆಯಾಗಿದ್ದು, 5819 ಸಿಂಧು ಮತಗಳಿದ್ದವು‌.ಒಟ್ಟು 87 ಮತಗಳು ತಿರಸ್ಕೃತವಾಗಿದೆ.<br />
ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಇಲ್ಲಿನ ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆಯಿತು.<br />
ಚುನಾವಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಮತ ಎಣಿಕೆ ಕೇಂದ್ರದಲ್ಲಿ ಉಪಸ್ಥಿತರಿದ್ದರು.<br />
 ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ಈ ಹಿನ್ನೆಲೆಯಲ್ಲಿ  ಉಪ ಚುನಾವಣೆ ನಡೆದಿದೆ.   2024 ರ ಅ.21ರಂದು ಮತದಾನ ನಡೆದಿತ್ತು ದ.ಕ,ಉಡುಪಿ ಜಿಲ್ಲೆಯ ಮತದಾನ ಕೇಂದ್ರ ಗಳಲ್ಲಿ ನಡೆದಿದೆ.<br />
2021 ರ ಡಿಸೆಂಬರ್ 10 ರಂದು ಈ ಕ್ಷೇತ್ರಕ್ಕೆ ನಡೆದ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, 3672, ಮಂಜುನಾಥ ಭಂಡಾರಿ 2079, ಎಸ್ಪಿಪಿಐ ಅಭ್ಯರ್ಥಿ 204 ಮತ ಪಡೆದಿದ್ದರು. ಕೋಟ ಶ್ರೀನಿವಾಸ ಪೂಜಾರಿ 1593 ಮತಗಳ ಅಂತರದಿಂದ ಜಯಗಳಿಸಿದ್ದರು.6,012  ಮತ ಚಲಾವಣೆಯಾಗಿದ್ದು, 5,955 ಮತಗಳು ಸಿಂಧುವಾಗಿದ್ದವು.</p>

news-details