ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂದನೀಯ ಫಾ. ಅಬ್ರಹಾಂ ಪಟ್ಟೇರಿ ಸನ್ಮಾನ

ಕಡಬ

news-details

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ ಮುದೂರು, ಬೈಂದೂರು ತಾಲ್ಲೂಕಿನ ಕಲ್ಮಕ್ಕಿ, ಹಾಗೂ ಬೆಳ್ತಂಗಡಿ ಬೆದ್ರಬೆಟ್ಟು ಚರ್ಚುಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಕಳೆದ 14 ವರ್ಷಗಳಿಂದ ಧರ್ಮಪ್ರಾಂತ್ಯದ ಹಣಕಾಸು ಅಧಿಕಾರಿ ಸ್ಥಾನದಲ್ಲಿ ಸೇವೆ ನಿರ್ವಹಿಸುತ್ತಿದ್ದಾರೆ.

ಅಕ್ಷರ ಮತ್ತು ಆಹಾರ ದಾಸೋಹದ ಮೂಲಕ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹೃದಯವಂತಿಕೆಯ ವ್ಯಕ್ತಿತ್ವವನ್ನು ಫಾ. ಪಟ್ಟೇರಿ ಹೊಂದಿದ್ದಾರೆ ಎಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ವಂದನೀಯ ಫಾ. ಶಾಜಿ ಮಾತ್ಯು ಶುಭಾಶಯ ಸಂದೇಶದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ಶ್ರೀ ಶಿಬು, ಶ್ರೀ ಜೋಬಿನ್, ಶ್ರೀ ಅಲೆಕ್ಸ್, ಶ್ರೀ ಅಲ್ಬಿನ್, ಲೆಕ್ಕಪರಿಶೋಧಕ ಶ್ರೀ ಸುರೇಶ್, ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ., ವಂದನೀಯ ಭಗಿನಿ ಸಿಸ್ಟರ್ ಲಿಸ್ ಮಾತ್ಯು, ಮತ್ತು ಶ್ರೀ ರೊಯ್ ಉಪಸ್ಥಿತರಿದ್ದರು.

news-details