ಕ್ರೀಡೆಯಲ್ಲಿ ಮುಖ್ಯವಾಗಿ ಬೇಕಾಗಿರುವುದು ಶಿಸ್ತು -ಪಂಜ ಉಪವಲಯ ಅರಣ್ಯಾಧಿಕಾರಿಗಳಾದ ಸಂತೋಷ್ ರೈ

ಪುತ್ತೂರು

news-details

ಗೆಲುವಿನ ಸಮಾಧಾನ, ಸೋಲಿನ ಅಸಮಾಧಾನ ಇವೆರಡೂ ಕ್ರೀಡೆಯಲ್ಲಿ ಸರ್ವೇಸಾಮಾನ್ಯ. ಕ್ರೀಡೆಯಲ್ಲಿ ಮುಖ್ಯವಾಗಿ ಬೇಕಾಗಿರುವುದು ಶಿಸ್ತು.ತಮ್ಮ ತಮ್ಮ ದೈಹಿಕ ದೃಢತೆಗೆ ಅನುಗುಣವಾದ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಮತ್ತಷ್ಟು ಪರಿಣಿತರಾಗಿ ಆಡಿದಾಗ ಗೆಲುವು ನಮ್ಮನ್ನು ಅರಸಿ ಬರುತ್ತದೆ. ಬಾಲ್ಯದಲ್ಲಿ ಮಾತ್ರವಲ್ಲದೆ ಮುಂದಿನ ವೃತ್ತಿ ಜೀವನದಲ್ಲೂ ಕ್ರೀಡೆಯನ್ನು ಅಳವಡಿಸಿಕೊಂಡು ಅದರಲ್ಲಿ ಪಾಲ್ಗೊಳ್ಳಿ ಎಂದು ಪಂಜ ಉಪವಲಯ ಅರಣ್ಯಾಧಿಕಾರಿಗಳಾದ ಸಂತೋಷ್ ರೈ ಹೇಳಿದರು.
ಗಜಾನನ ವಿದ್ಯಾಸಂಸ್ಥೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಧ್ವಜಾರೋಹಣವನ್ನು ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿದ ಹಾಗೂ ಗೌರವ ವಂದನೆ ಸ್ವೀಕರಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನನ್ಯ ಅಚ್ಚುತ ಮೂಡೆತ್ತಾಯ ಮಾತನಾಡಿ
ಬಾಲ್ಯದ ಕ್ರೀಡಾಕೂಟದ ನೆನಪು ನಮ್ಮಲ್ಲಿ ಶಾಶ್ವತವಾಗಿರುತ್ತದೆ. ಕ್ರೀಡೆಯ ಮಹತ್ವವನ್ನು ನಾವು ಅರಿತುಕೊಳ್ಳಬೇಕು ಹಾಗೂ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಪುತ್ತೂರು ಉಪ ವಲಯ ಅರಣ್ಯ ಅಧಿಕಾರಿ ಮದನ್ ಬಿ ಕೆ ಮಾತನಾಡಿ ಕ್ರೀಡೆಯಲ್ಲಿ ಪ್ರಾಮಾಣಿಕರಾಗಿ ಆಡಿ,ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಸಿಗುವ ಖುಷಿ ಹಾಗೂ ನೆನಪುಗಳು ಮುಖ್ಯ ಎಂದರು.

ಶಾಲಾ ಪ್ರಾಂಶುಪಾಲರಾದ ಕೆ ಶಾಮಣ್ಣರವರು ಮಾತನಾಡಿ ಉತ್ತಮ ಆರೋಗ್ಯಕ್ಕೆ ಕ್ರೀಡೆ ಮುಖ್ಯ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ಶಾಲಾಡಳಿತ ಮಂಡಳಿಯ ಸಂಚಾಲಕರಾದ ಶಿವರಾಮ್ ಪಿ ಮಾತನಾಡಿ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಭೌತಿಕ ಬೆಳವಣಿಗೆಯು ಅಗತ್ಯ,ನಮ್ಮ ಶಾಲೆಯು ಇನ್ನಷ್ಟು ಉನ್ನತ ಮಟ್ಟಕ್ಕೆೇರಲಿ ಎಂದು ಶುಭ ಹಾರೈಸಿದರು.
ಗಜಾನನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ನರೇಂದ್ರ ಭಟ್, ಶಾಲಾ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ನಾಗಪ್ಪ ಗೌಡ ಬೊಮ್ಮಟ್ಟಿ, ಜೈರಾಜ್ ರೈ,ನಹುಷ ಪಿ,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ ಹಾಗೂ ಸದಸ್ಯರು, ನಿವೃತ್ತ ದೈಹಿಕ ಶಿಕ್ಷಕರಾದ ಆನಂದ ರೈ, ದೈಹಿಕ ಶಿಕ್ಷಕರಾದ ಪ್ರಸಾದ್ ಹಾಗೂ ಸೌಮ್ಯಶ್ರೀ, ಶಾಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯನಿ ಸೌಮ್ಯ ಎ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ್ ವಂದಿಸಿದರು. ಕ್ರೀಡಾಮಂತ್ರಿ ಶೌರ್ಯ ಪೆರ್ಲಂಪಾಡಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು.ಹನುಮಗಿರಿ ಆಂಜನೇಯ ಕ್ಷೇತ್ರದಿಂದ ಕ್ರೀಡಾ ಜ್ಯೋತಿಯನ್ನು ಉನ್ನತ ಸಾಧನೆಗೆ ಗೈದ ಕ್ರೀಡಾಪಟುಗಳ ಮೂಲಕ ತರಲಾಯಿತು.ಶಿಕ್ಷಕರಾದ ಉತ್ತಮ್ ಪಿ ಕಾರ್ಯಕ್ರಮ ನಿರೂಪಿಸಿದರು.

news-details