ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ -ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಪುತ್ತೂರು

news-details

ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆ ಇಲ್ಲಿ ಡಿ. 13ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಗಜಾನನ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ರಾದ ನನ್ಯ ಅಚ್ಚುತ ಮೂಡೆತ್ತಾಯರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಮೇಧ-2024 ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಪಡೆದ ಚಿನ್ಮಯ್ ನನ್ನು ಅಭಿನಂದಿಸಿ ಮಾತನಾಡಿ ಬಂದಿರುವ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಯಶಸ್ಸನ್ನು ಗಳಿಸಿರಿ ಎಂದು ಶುಭನುಡಿದರು.
ಶಾಲೆಯ ಪ್ರಾಂಶುಪಾಲರಾದ ಕೆ ಶಾಮಣ್ಣರವರು ಪ್ರಾಸ್ತಾವನೆಗೈದರು. ಶಾಲೆಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಲೋಕೇಶ್ ಪೆರ್ಲಂಪಾಡಿ ಇವರು ಮಾತನಾಡಿ ಸೋಲನ್ನು ಗೆಲುವಾಗಿ ಪರಿಗಣಿಸಿದರೆ ಮಾತ್ರ ಮುಂದೆ ಗೆಲುವು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ನಾಗಪ್ಪ ಗೌಡ ಬೊಮ್ಮಟ್ಟಿ, ಜೈರಾಜ್ ರೈ, ರತಿ ರಮೇಶ್, ಡಾ. ಸೌಮ್ಯ ಜೋಷಿ, ಸತ್ಯಪ್ರಕಾಶ್, ಮುಖ್ಯ ಶಿಕ್ಷಕಿಯರಾದ ಸೌಮ್ಯ ಎ ಹಾಗೂ ಲತಾ ಡಿ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಬಿಂಧ್ಯಾ ಮತ್ತು ಬಳಗದವರು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿಯರಾದ ಸೌಮ್ಯ ಎ ಸ್ವಾಗತಿಸಿ, ಲತಾ ಡಿ ಕೆ ವಂದಿಸಿದರು. ಶಿಕ್ಷಕಿಯರಾದ ಅಂಜಲಿ ಹಾಗೂ ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಂಡಿತ್ತು.

news-details