ನವೋದಯ ಸ್ವ ಸಹಾಯ ಸಂಘಗಳ ಐತಿಹಾಸಿಕ ಸಮಾವೇಶಕ್ಕೆ ಸಿದ್ಧತೆ ಪೂರ್ಣ-ಡಾ.ಎಂ. ಎನ್.ರಾಜೇಂದ್ರ ಕುಮಾರ್.

ಮಂಗಳೂರು

news-details

ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಯಲ್ಲಿ ಮೇ.10ರಂದು ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ” ರಾಜ್ಯದ ಐತಿಹಾಸಿಕ ಸಮಾವೇಶ ವಾಗಲಿದೆ. ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿರುವುದು ರಾಜ್ಯದಲ್ಲಿಯೇ ಪ್ರಥಮ .ಈ ಹಿನ್ನಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವರು ಗುರುವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಸುದ್ದಿ ಗೋಷ್ಠಿ ಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಈ ಸಮಾವೇಶ ಮಹಿಳಾ ಸಬಲೀಕರಣ,ಸಶಕ್ತತೆಯ ಹಿನ್ನೆಲೆಯಲ್ಲಿ ಇತರರಿಗೂ ಮಾದರಿ ಸಮಾವೇಶ ಆಗಬೇಕು
ಎನ್ನುವುದು ನಮ್ಮ ಆಶಯ. ಈ ಸಮಾರಂಭ ದಲ್ಲಿ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಸರಕಾರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕಯು.ಟಿ. ಖಾದರ್ ಫರೀದ್, ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಮಾನ್ಯ ಸಚಿವ ಪ್ರಹ್ಲಾದ್ ವಿ. ಜೋಶಿ ಮೊದಲಾದವರು ಆಗಮಿಸಲಿದ್ದಾರೆ.
ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾ ಪ್ರಭುತ್ವದ ತಳಹದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು , ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ಸಾಗುತ್ತಿದೆ. ಈ ಒಂದು ಉದಾತ್ತವಾದ ಉದ್ದೇಶವ ನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರ ಮವನ್ನು ಹಮ್ಮಿಕೊಳ್ಳ ಲಾಗಿದೆ ಎಂದುಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
*ಎಲ್ಲರನ್ನೂ ಒಳಗೊಳ್ಳುವ ಸಮಾವೇಶ- ನವೋದಯ ಸ್ವ ಸಹಾಯ ಸಂಘದಲ್ಲಿ ಜಾತಿ,ಮತ ಭೇದ ವಿಲ್ಲದೆ ಎಲ್ಲಾ ಜನರನ್ನು ಒಳಗೊಂಡ ಸಮಾವೇಶ ಎಂದು ಸಮಾ ವೇಶದ ಸಂಘಟಕರಾದ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
2000ನೇ ಇಸವಿಯ ಜನವರಿ 29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದ್ದು. ಇದರಲ್ಲಿ ಸುಮಾರು 5ಲಕ್ಷಕ್ಕೂ ಹೆಚ್ಚು ಲಸದಸ್ಯರಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿ ಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾನ್ಯ ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ. ಕರ್ನಾಟಕ ಸರಕಾರದ ಮಾನ್ಯ ಮಾಜಿ ಮುಖ್ಯ ಮಂತ್ರಿಗಳಾದ ಡಾ| ಎಂ. ವೀರಪ್ಪ ಮೊಯ್ಲಿ, ಕರ್ನಾಟಕ ಸರಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್. ರಾಜ್ಯದ ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶ ನಾಲಯ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ. ಹಾಗೂ ರಾಜ್ಯದ ಮಾನ್ಯ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದು ದೇವಿಪ್ರಸಾದ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ
ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ , ಎಸ್. ಬಿ.ರಾಜೇಶ್ ರಾವ್, ಕುಶಾಲಪ್ಪ ಗೌಡ, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ,ಜನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜ ಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಉದ್ಯಮಿ ಪುಷ್ಪರಾಜ್ ಜೈನ್ , ನವೋದಯ ಚ್ಯಾರಿಟೇಬಲ್ ಟ್ರಸ್ಟ್ ನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ , ಮೊದಲಾ ದವರು ಉಪಸ್ಥಿತರಿದ್ದರು.
*ಬೃಹತ್ ಸಭಾಂಗಣ;-ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಒಂದೂವರೆ ಲಕ್ಷ ಜನರು ಭಾಗವಹಿಸಬಹುದಾದ ಬೃಹತ್ ಸಭಾಂಗಣ ನಿರ್ಮಿಸಲಾಗಿದೆ.
*3ಸಾವಿರ ಬಸ್ ಹಾಗೂ 750ಕಾರ್ ಗಳನ್ನು ವ್ಯವಸ್ಥೆ ಮಾಡಲಾಗಿದೆ.
*ಊಟದ ವ್ಯವಸ್ಥೆ ಗಾಗಿ ಸ್ಥಳದಲ್ಲಿ 160 ಕೌಂಟರ್ ನಿರ್ಮಿಸಲಾಗಿದೆ.
*ನವೋದಯ ಸ್ವ ಸಹಾಯ ಗುಂಪುಗಳ ವಸ್ತು ಪ್ರದರ್ಶನ ದ ವ್ಯವಸ್ಥೆ ಇರುತ್ತದೆ.
*ಪಡುಬಿದ್ರೆ ಬಂಟರ ಸಭಾಂಗಣ,ವಾಮಂ ಜೂರು,ಬಂಟ್ವಾಳ ಬಂಟರ ಭವನ,ಯಶಸ್ವಿ ಹಾಲ್ ಪರಂಗಿಪೇಟೆ ಯಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಆಹಾರದ ಪೊಟ್ಟಣ ನೀಡಲಾಗುವುದು ಎಂದು ದೇವಿ ಪ್ರಸಾದ್ ಶೆಟ್ಟಿ ಸಮಾವೇಶದ ಸಿದ್ಧತೆಯ ಬಗ್ಗೆ ವಿವರಿಸಿದರು.
*ಬಂಗ್ರಕೂಳೂರಿನಲ್ಲಿ ಎಂ.ಎನ್.ಆರ್ ಪ್ರೊಡಕ್ಷನ್ಸ್ ಸಂಸ್ಥೆಯ ವತಿಯಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಮೂಲಕ ನಿರ್ಮಾಪಕರಾಗಿರುವ ವಿಜಯ ಕುಮಾರ್ ಕೊಡಿಯಾಲ ಬೈಲ್ ರವರ ನಿರ್ದೇಶನದ " ಡಾಕ್ಟ್ರಾ ಭಟ್ರಾ "ಹೆಸರಿನ ತುಳು ಚಲನ ಚಲನಚಿತ್ರದ ಪೋಸ್ಟರನ್ನು ಡಾ‌ಎಂ.ಎನ್.ರಾಜೇಂದ್ರ ಕುಮಾರ್ ಗುರುವಾರ ಬಿಡುಗಡೆ ಗೊಳಿಸಿದರು.ಈ ಸಂದರ್ಭದಲ್ಲಿ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ ಬೈಲ್ ಉಪಸ್ಥಿತರಿದ್ದರು.

news-details