ಮೇ. 24:ಪಾಣಾಜೆ ಗ್ರಾಮದ ದೇವಸ್ಯ ಅಂಗನವಾಡಿ ಕೇಂದ್ರದ ಸುಸಜ್ಜಿತ ನೂತನ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಸಮಾರಂಭ

ಪುತ್ತೂರು

news-details

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಪುತ್ತೂರು ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಪಾಣಾಜೆ ಗ್ರಾಮ ಪಂಚಾಯತ್ ಹಾಗೂ ಬಾಲವಿಕಾಸ ಸಮಿತಿ ದೇವಸ್ಯ
ಇದರ ಸಹಯೋಗದಲ್ಲಿ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಒಗ್ಗೂಡಿಸುವಿಕೆ ಅನುದಾನದಲ್ಲಿ ನಿರ್ಮಿತವಾದ
ದೇವಸ್ಯ ಅಂಗನವಾಡಿ ಕೇಂದ್ರದ ಸುಸಜ್ಜಿತ ನೂತನ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಸಮಾರಂಭ ಮೇ 24ರಂದು ಅಪರಾಹ್ನ 4-00 ಗಂಟೆಗೆ ನಡೆಯಲಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ನೂತನ ಅಂಗನವಾಡಿ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ
ಶ್ರೀಮತಿ ಮೈಮೂನತುಲ್ ಮೆಹ್ರಾ ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ನವೀನ್ ಕುಮಾರ್ ಭಂಡಾರಿ. ಪುತ್ತೂರು ಉಪವಿಭಾಗ ಜಿ.ಪಂ ಇಂಜಿನಿಯರಿಂಗ್ ಸಹಾಯಕ ಕಾರ್ಯಪಾಲ ಅಭಿಯಂತರರು ಶ್ರೀ ಭರತ್ ಬಿ ಯಂ,ಶಿಶು ಅಭಿವೃದ್ಧಿ ಇಲಾಖೆ ಪುತ್ತೂರು ಇದರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರಿಯ ಆಗ್ನೆಸ್,ತಾಲೂಕು ಪಂಚಾಯತ್ ಪುತ್ತೂರು
ಇದರ ಸಹಾಯಕ ನಿರ್ದೇಶಕರಾದ ಶ್ರೀ ವಿಲೆಡ್ ರೋಡ್ರಿಗಸ್,ಗ್ರಾಮ ಪಂಚಾಯತ್ ಪಾಣಾಜೆ ಇದರ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾ ಬಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

news-details